ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ಮಾನಸ ಆಚೆ ಬರೋದ್ಯಾರು?
ಬಹಳ ವಿಭಿನ್ನವಾಗಿ ನಡೆದ ಬಿಗ್ಬಾಸ್ ನಾಮಿನೇಷನ್ ಪ್ರಕ್ರಿಯೆ
12 ಜನರಲ್ಲಿ ಈ ವಾರ ನಾಮಿನೇಷನ್ನಿಂದ ಸೇಫ್ ಆಗೋದ್ಯಾರು?
ಈ ಬಾರಿಯ ಕನ್ನಡದ ಬಿಗ್ಬಾಸ್ ಸೀಸನ್ 11ರಲ್ಲಿ ಒಂದಲ್ಲಾ ಒಂದು ಬದಲಾವಣೆಗಳು ಆಗುತ್ತಲೇ ಇವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್ಬಾಸ್ ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಆದರೆ ಈ ಬಾರಿ ನಡೆದ ನಾಮಿನೇಷನ್ ಕೊಂಚ ಬೇರೆಯಾಗಿತ್ತು.

ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 12 ಮಂದಿ ನಾಮಿನೇಟ್ ಆಗಿದ್ದಾರೆ. ಒಟ್ಟು 14 ಸ್ಪರ್ಧಿಗಳಲ್ಲಿ ಗೌತಮಿ ಮತ್ತು ತ್ರಿವಿಕ್ರಮ್ ಬಿಟ್ಟು ಉಳಿದ ಎಲ್ಲರೂ ನಾಮಿನೇಟ್ ಆಗಿದ್ದಾರೆ. ಅದರಲ್ಲೂ ಕ್ಯಾಪ್ಟನ್ ಹನುಮಂತ ಆಯ್ಕೆಯ ಅನುಸಾರ ಗೋಲ್ಡ್ ಸುರೇಶ್ ಅವರು ನೇರ ನಾಮಿನೇಟ್ ಆಗಿದ್ದಾರೆ.

ಅಲ್ಲದೇ ಕಳೆದ ವಾರ ಬಿಗ್ಬಾಸ್ ಮನೆಯಿಂದ ಹಂಸಾ ಅವರು ಆಚೆ ಹೋಗುವಾಗ ವಿಶೇಷ ಅಧಿಕಾರವನ್ನ ಬಳಸಿ ಹನುಮಂತ ಅವರನ್ನು ನೇರವಾಗಿ ನಾಮಿನೇಟ್ ಮಾಡಿದ್ದರು. ಉಳಿದಂತೆ ಭವ್ಯಾ ಗೌಡ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ತುಕಾಲಿ ಮಾನಸ , ಉಗ್ರಂ ಮಂಜು, ಅನುಷಾ ರೈ , ಧರ್ಮ ಕೀರ್ತಿರಾಜ್, ಐಶ್ವರ್ಯ, ಧನರಾಜ್, ಶಿಶರ್ ಶಾಸ್ತ್ರಿ ನಾಮಿನೇಟ್ ಆಗಿದ್ದಾರೆ. ಆದರೆ ನಾಮಿನೇಟ್ ಆದ 12 ಜನರಲ್ಲಿ ಈ ವಾರ ಯಾರು ಬಿಗ್ಬಾಸ್ ಮನೆಯಿಂದ ಆಚೆ ಬರಲಿದ್ದಾರೆ ಎಂದು ಭಾನುವಾರದ ಎಪಿಸೋಡ್ನಲ್ಲಿ ತಿಳಿದು ಬರಲಿದೆ.




